ಪ್ರಿಯದರ್ಶಿನಿ ಶಾಲಾ ವಠಾರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸುದ್ದಿ

ಬೆಟ್ಟಂಪಾಡಿ: ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಂ ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಆಶಯದಂತೆ ಉಪ್ಪಿನಂಗಡಿ ಮಂಡಲ ಬೆಟ್ಟಂಪಾಡಿ ವಲಯದ ನೇತೃತ್ವದಲ್ಲಿ ಪ್ರಿಯದರ್ಶಿನಿ ಶಾಲಾ ವಠಾರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

 

ಕಾರ್ಯಕ್ರಮವನ್ನು ಪ್ರಿಯದರ್ಶಿನಿ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸದಾಶಿವ ರೈ ಗುಮ್ಮಟೆಗದ್ದೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಟ್ಟಂಪಾಡಿ ವಲಯ ಅಧ್ಯಕ್ಷ ಶ್ರೀಹರಿ ದರ್ಬೆ ವಹಿದ್ದರು.

ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆ, ನಿಡ್ಪಳ್ಳಿ ಗ್ರಾಮ ವಿಕಾಸ ಸಮಿತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಟ್ಟಂಪಾಡಿ ಸಹಕಾರದಲ್ಲಿ ಶಿಬಿರ ನಡೆಯಿತು. ಸುಮಾರು ೨೪ ಮಂದಿ ರಕ್ತದಾನ ಮಾಡಿದರು.

 

ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ರಂಗನಾಠ ರೈ ಗುತ್ತು, ನಿಡ್ಪಳ್ಳಿ ಶ್ರೀಶಾಂತಾದುರ್ಗಾ ದೇವಸ್ಥಾನ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ, ನವೋದಯ ಪ್ರೌಢ ಶಾಲೆಯ ನಿವೃತ್ತ ಮುಖ ಶಿಕ್ಷಕ ಮಂಜುಳಗಿರಿ ವೆಂಕಟ್ರಮಣ ಭಟ್ ಉಪಸ್ಥಿತರಿದ್ದರು. ಶಿವಕಿರಣ ದರ್ಭೆ ಕಾರ್ಯಕ್ರಮ ನಿರೂಪಿಸಿದರು.

Author Details


Srimukha

Leave a Reply

Your email address will not be published. Required fields are marked *