ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಮರ್ಪಣೆ

ಗೋಕರ್ಣ: ಅಶೋಕೆಯಲ್ಲಿ ನಡೆದ ಮುಳ್ಳೇರಿಯಾ ಮಂಡಲದ ಛಾತ್ರ ಭಿಕ್ಷೆಯಂದು ಶ್ರೀರಾಮಚಂದ್ರಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ವಿ. ವಿ. ವಿ. ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಾಂಕೇತಿಕವಾಗಿ ಸಮರ್ಪಣೆ ಮಾಡಲಾಗಿತ್ತು. ಗುಂಪೆ ವಲಯದ ಮಾತೃಪ್ರಧಾನೆ ಗುಂಪೆ ಕಾವೇರಿ ಅಮ್ಮ ವಾಗ್ದಾನ ಮಾಡಿದಂತೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಅಂದಾಜು ೨೦,೦೦೦ ಮೌಲ್ಯದ ಕಲಿಕೋಪಕರಣಗಳನ್ನು ಶ್ರೀಮಠದ ಶಾಸನತಂತ್ರದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ ಎಡಪ್ಪಾಡಿ ಮೂಲಕ ಸೆ.೧೫ ರಂದು ಸಮರ್ಪಣೆ ಮಾಡಿದರು. ಅಶೋಕೆಯ ಇಂಜಿನಿಯರ್ ವಿಷ್ಣುಪ್ರಸಾದ್ ಬನಾರಿ ಉಪಸ್ಥಿತರಿದ್ದರು.

Continue Reading

ಈಜು ಸ್ಪರ್ಧೆಯಲ್ಲಿ ೩ ಚಿನ್ನ ಗಳಿಸಿದ ಅಮನ್ ಕೆ. ದೇವಾಡಿಗ

ಮಂಗಳೂರು: ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ೧೪ರ ವಯೋಮಾನ ವಿಭಾಗದ ೫೦ ಮೀ., ೧೦೦ ಮೀ. ಮತ್ತು ೨೦೦ ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ೩ […]

Continue Reading

ಮುಜುಂಗಾವು ವಿದ್ಯಾಪೀಠಕ್ಕೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ದೇಣಿಗೆ ಸಮರ್ಪಣೆ

ಮುಳ್ಳೇರಿಯಾ: ಮಂಡಲದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನೂತನವಾಗಿ‌ ನಿರ್ಮಿಸುತ್ತಿರುವ ಭೊಜನ ಶಾಲೆಗೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ಸಹಾಯಧನವನ್ನು ವಿತರಿಸಲಾಯಿತು.   ಗುಂಪಿನಲ್ಲಿರುವ 60 ಜನರು ಈ ಕಾರ್ಯದಲ್ಲಿ ಭಾಗಿಯಾಗಿ 60606 ರೂ. ಸಂಗ್ರಹಿಸಿ ವಿದ್ಯಾಪೀಠಕ್ಕೆ ಸಮರ್ಪಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ ಹಿಳ್ಳೆಮನೆ, ಕೋಶಾಧಿಕಾರಿ ಉದನೇಶ್ವರ ಪ್ರಸಾದ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ ಮಾರ್ಗ, ಹಿರಿಯ ಅಧ್ಯಾಪಕರಾದ ಬಾಲಕೃಷ್ಣ ಶರ್ಮ ದೇಣಿಗೆಯನ್ನು ಸ್ವೀಕರಿಸಿದರು.   […]

Continue Reading

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರು: ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಾಣಿ ಅಬ್ಬಕ್ಕ @500 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು-20 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿವೃತ್ತ ಶಿಕ್ಷಕಿ‌ ಸುಭದ್ರಾ ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ ಕೆಲವು ಗುಣಗಳಾದ ಕಾಕದೃಷ್ಟಿ, ಬಕಧ್ಯಾನ, ಶ್ವಾನ ನಿದ್ರಾ ಬಗ್ಗೆ ಹಾಗೂ ಸ್ವಾಮಿ ವಿವೇಕಾನಂದರು, ಶಂಕರಾಚಾರ್ಯರು ಮುಂತಾದ ಆದರ್ಶ ವ್ಯಕ್ತಿಗಳು ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಹೇಳಿದರು. ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಕುಮಾರ್ ಉದ್ಘಾಟಿಸಿ, ಮಾತನಾಡಿ, ಕತ್ತಲೆಯಿಂದ ಬೆಳಕಿನೆಡೆಗೆ ದಾರಿ […]

Continue Reading

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನವೀಕರಣಗೊಂಡ ಭೋಜನ ಶಾಲೆ

ಬದಿಯಡ್ಕ: ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸುಸಜ್ಜಿತ ವ್ಯವಸ್ಥೆಗಳೊಂದಿಗೆ ನವೀಕರಣಗೊಂಡ ‘ಅನ್ನಮಯೀ’ ಭೋಜನ ಶಾಲೆಯಲ್ಲಿ ಗುರುವಾರ ಸಂಜೆ ಹಾಗೂ ಶುಕ್ರವಾರದಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ಕಟ್ಟಡದ ಲೋಕಾರ್ಪಣಾ ಸಮಾರಂಭದ ಪೂರ್ವಭಾವಿಯಾಗಿ ನಡೆದ ಕಾರ್ಯಕ್ರಮಗಳಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷರು ಗಣೇಶ ಜೆ.ಎಲ್., ಸುಶಾಸನಾ ಖಂಡದ ಶ್ರೀ ಸಂಯೋಜಕ ಪ್ರವೀಣ ಭೀಮನಕೋಣೆ, ಶಾಲಾ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಅಧ್ಯಾಪಕ ವೃಂದದವರು, ಶಾಲಾ ಹಿತೈಶಿಗಳು ಪಾಲ್ಗೊಂಡಿದ್ದರು.    

Continue Reading

ಪರಿಸರ ಸ್ನೇಹಿ ಅವಜಲ ಘಟಕ ಲೋಕಾರ್ಪಣೆ

ಗೋಕರ್ಣ: ವಿವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಸರ ಸ್ನೇಹಿ ಅವಜಲ ಘಟಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಲೋಕಾರ್ಪಣೆಗೊಳಿಸಿದರು. ಶ್ರೀಸಂಸ್ಥಾನದವರು ರಾಸಾಯನಿಕ ರಹಿತ, ಕೇವಲ ತುಳಸಿ, ಸ್ಫಟಿಕ ಮತ್ತು ಹಾಸುಗಲ್ಲು ಬಳಸಿ ಘಟಕ ನಿರ್ಮಿಸಿದ ಬಾಲಚಂದ್ರ ಹೆಗಡೆ ಮತ್ತು ಗಜಾನನ ಹೆಗಡೆಯವರನ್ನು ಸನ್ಮಾನಿಸಿ ಆಶೀರ್ವದಿಸಿದರು. “ಪ್ರಕೃತಿಯಲ್ಲಿ ಸಿಗುವುದೆಲ್ಲವೂ ಶುದ್ಧ. ನಾವು ಅದನ್ನು ಮಲಿನಗೊಳಿಸುತ್ತೇವೆ. ಉಪಯೋಗಿಸಿ ಅಶುದ್ಧವಾದ್ದನ್ನು ಶುದ್ಧ ಮಾಡುವುದು ಪ್ರವಾಹದ ವಿರುದ್ಧ ಈಜಿದಂತೆ. ಕೊಳಚೆ ನೀರನ್ನು ಬಾವಿ ನೀರಿನಷ್ಟೇ ಶುದ್ಧಗೊಳಿಸುವ ಈ ಅವಜಲ ಘಟಕ ಎಲ್ಲೆಡೆಗೆ […]

Continue Reading

ಹವ್ಯಕ ಭಾಷೆ ಅಧ್ಯಯನ, ಸಂಶೋಧನೆಗೂ ಅವಕಾಶ: ರಾಘವೇಶ್ವರ ಶ್ರೀ – ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಸ್ಥಾಪನೆ

ಗೋಕರ್ಣ: ಸ್ವಭಾಷಾ ಚಾತುರ್ಮಾಸ್ಯದ ಸವಿನೆನಪಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಮತ್ತು ಹವ್ಯಕ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪ್ರಕಟಿಸಿದರು. ಸ್ವಭಾಷಾ ಚಾತುರ್ಮಾಸ್ಯದ 53ನೇ ದಿನವಾದ ಭಾನುವಾರ ಮಂಗಳೂರು ಮಂಡಲದ ಮಂಗಳೂರು ಮಧ್ಯ, ಉತ್ತರ, ದಕ್ಷಿಣ, ಉಡುಪಿ, ಕುಂದಾಪುರ ಮತ್ತು ಮುಡಿಪು ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಕನ್ನಡದ ಕವಿರಾಜ ಮಾರ್ಗದ ರೀತಿಯಲ್ಲಿ ಹವ್ಯಕ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗುರುರಾಜಮಾರ್ಗ ಅನುಷ್ಠಾನಕ್ಕೆ ಬರಲಿದೆ. ಚಾತುರ್ಮಾಸ್ಯದ ಬಳಿಕವೂ ಸ್ವಭಾಷಾ ಅಭಿಯಾನ […]

Continue Reading

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ

  ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. […]

Continue Reading

ಭಾವ, ರಾಗ, ತಾಳ ಮೇಳೈಸಿದರೆ ಜೀವನ ಆಹ್ಲಾದಕರ: ರಾಘವೇಶ್ವರ ಶ್ರೀ

ಗೋಕರ್ಣ: ಭಾವ, ರಾಗ, ತಾಳ ಮೇಳೈಸಿದಾಗ ಸಂಗೀತ ಹೇಗೆ ಸುಶ್ರಾವ್ಯವಾಗುವುದೋ ಜೀವನ ಆಹ್ಲಾದಕರ ಆಗಬೇಕಾದರೆ ಮನಸ್ಸು, ಮಾತು ಮತ್ತು ಕೃತಿ ಒಂದಾಗಬೇಕು ಎಂದು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಶುಕ್ರವಾರ ಅಶೋಕೆಯ ವಿದ್ಯಾವಿಶ್ವ ಸಭಾಂಗಣದಲ್ಲಿ ಆಯೋಜಿಸಿದ್ದ ಭಾವಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಜೀವನ ಕೂಡಾ ಒಂದು ಸಂಗೀತ. ಜೀವನ ಮುನ್ನಡೆಯಬೇಕಾದರೆ ಅಂದರೆ ಜೀವನದಲ್ಲಿ ‘ಭರತ’ ಬರಬೇಕಾದರೆ ಭಾವ, ರಾಗ ಹಾಗೂ ತಾಳ ಅಗತ್ಯ. […]

Continue Reading

ವಿವಿವಿಯಲ್ಲಿ ಎರಡು ದಿನಗಳ ಸಂಗೀತೋತ್ಸವಕ್ಕೆ ತೆರೆ ಸಂಗೀತ ಮೋಕ್ಷಕ್ಕೆ ಸಾಧನ: ರಾಘವೇಶ್ವರ ಶ್ರೀ

ಗೋಕರ್ಣ: ಸಂಗೀತ ಮೋಕ್ಷಕ್ಕೆ ಸಾಧನ; ಇದು ಕೇವಲ ಮನಸ್ಸಿಗೆ ಮುದನೀಡುವ ಸಾಧನವಲ್ಲ. ಸಂಗೀತದ ಮೂಲಕ ಜನತೆ ಮತ್ತು ಜನಾರ್ದನನನ್ನು ಕೂಡಾ ಮೆಚ್ಚಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಸಂಗೀತೋತ್ಸವದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು, “ಸಂಗೀತ ಮೋಕ್ಷಕ್ಕೆ ಸಾಧನ ಎಂದು ಯಾಜ್ಞವಲ್ಕ್ಯ ಸ್ಮøತಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಂಗೀತ ಕೇವಲ ಮನೋರಂಜನೆಯಲ್ಲ ಸಾಧನವಲ್ಲ. ಜನರನ್ನು ಮಾತ್ರವಲ್ಲದೇ ಇದರಿಂದ ಜನಾರ್ದನನ್ನೂ ಮೆಚ್ಚಿಸಬಹುದು. ವಿದ್ಯಾರ್ಥಿಗಳು ಮೇರು ಕಲಾವಿದರಿಂದ ಸ್ಫೂರ್ತಿ ಪಡೆದು ಇಂಥ […]

Continue Reading

ಸಂಗೀತೋತ್ಸವಕ್ಕೆ ಅದ್ದೂರಿ ಚಾಲನೆ: ವಿಷ್ಣುಗುಪ್ತ ವಿವಿಯಲ್ಲಿ ನಾದವೈಭವ

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಬುಧವಾರ ಎರಡು ದಿನಗಳ ಸಂಗೀತೋತ್ಸವಕ್ಕೆ ಖ್ಯಾತ ಸಂಗೀತ ವಿದುಷಿ ವಿ.ಕಾಂಚನ ರೋಹಿಣಿ ಸುಬ್ಬರತ್ನಂ ಚಾಲನೆ ನೀಡಿದರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿದ ಪಾರಂಪರಿಕ ಸಂಗೀತ ವಿದ್ಯೆ, ಕಲೆಯನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಯಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಆಯೋಜಿಸಿದ್ದ ಈ ಸಂಗೀತೋತ್ಸವದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದ ದಿಗ್ಗಜರಿಂದ ಗುರುಕುಲದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾವಿಶ್ವ ಸಭಾಂಗಣದಲ್ಲಿ ದಿನವಿಡೀ ನಡೆದ ಸಂಗೀತೋತ್ಸವದ ಮೊದಲ […]

Continue Reading

ಯೋಗ ಜೀವ-ದೇವ ಬೆಸೆಯುವ ಬಂಧ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಯುಕ್ತ ಆಹಾರ, ವಿಹಾರ, ಚಟುವಟಿಕೆ ಮೂಲಕ ನಿದ್ದೆ, ಸ್ವಪ್ನ, ಜಾಗೃತಸ್ಥಿತಿ ಮತ್ತು ಸಮಾದಿ ಸ್ಥಿತಿಯನ್ನು ಆನಂದಿಸುವುದೇ ನಿಜವಾದ ಯೋಗ. ಯೋಗ ಜೀವಾತ್ಮ ಮತ್ತು ಪರಮಾತ್ಮನನ್ನು ಬೆಸೆಯುವ ಪವಿತ್ರ ಬಂಧ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ನುಡಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸೋಮವಾರ ಹಮ್ಮಿಕೊಂಡಿದ್ದ “ಯೋಗಾಂತರಂಗ” ಅಂತರ್ಜಾಲ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಆಹಾರ, ವಿಹಾರ, ಕ್ರಿಯೆ ಯುಕ್ತವಾಗಿದ್ದಾಗ ಜಾಗೃತಿ, ನಿದ್ದೆ, ಸ್ವಪ್ನಸ್ಥಿತಿಯ ಆನಂದ ಸವಿಯುವ […]

Continue Reading

ಸತ್ಕಾರ್ಯಗಳೇ ಸುಖನಿದ್ದೆಯ ಗುಟ್ಟು: ರಾಘವೇಶ್ವರ ಸ್ವಾಮೀಜಿ

ಕಾರವಾರ/ ಗೋಕರ್ಣ: ಭಾರತೀಯ ಪರಂಪರೆಯಲ್ಲಿ ನಿದ್ರೆಯೂ ದೈವಸ್ವರೂಪ. ಸತ್ಯ ಮತ್ತು ಧರ್ಮ ಮಾರ್ಗದಲ್ಲಿ ನಡೆದು ಆತ್ಮಸಾಕ್ಷಿ ಒಪ್ಪುವಂಥ ಸತ್ಕಾರ್ಯಗಳನ್ನು ಮಾಡುವ ಮೂಲಕ ನಿದ್ರಾದೇವಿಯಿಂದ ಸುಖನಿದ್ದೆಯೆಂಬ ವರ ಪಡೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಸಲಹೆ ಮಾಡಿದರು. ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಜ್ಞಾನ ವಿಜ್ಞಾನ ಚಿಂತನ ಸತ್ರ ಮಾಲಿಕೆಯಡಿ ‘ಸ್ವಸ್ಥ ಮನಸ್ಸಿಗಾಗಿ ಸುಖನಿದ್ದೆ’ ಎಂಬ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಪ್ತಶತಿಯ “ಯಾದೇವಿ ಸರ್ವಭೂತೇಶು ನಿದ್ರಾರೂಪೇಣ ಸಂಸ್ಥಿತಾ..” ಎಂಬ ಸ್ತೋತ್ರ ನಮ್ಮ […]

Continue Reading

ಮಕ್ಕಳ ಕಲಿಕೆಗೆ ಉತ್ತಮ ಪರಿಸರ, ಸಂಸರ್ಗ ಅಗತ್ಯ; ರಾಘವೇಶ್ವರ ಶ್ರೀ

ಕಾರವಾರ: ಗುಣ- ದೋಷಗಳೆರಡಕ್ಕೂ ಸಹವಾಸವೇ ಕಾರಣ. ಆದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಪರಿಸರ ಮತ್ತು ಉತ್ತಮ ಸಂಸರ್ಗ ಕಲ್ಪಿಸುವ ಮೂಲಕ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪುಗೊಳಿಸುವ ಅಗತ್ಯವಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಗುರುಕುಲಗಳ ವಿದ್ಯಾರಂಭ ಸಮಾರಂಭದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ರಾಮಾಯಣದ ರಾಮ ಅಭಯ ಸ್ತೋತ್ರವನ್ನು ಆನ್‍ಲೈನ್ ಮೂಲಕ ಗುರುಕುಲದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ವಿದ್ಯಾರಂಭಕ್ಕೆ ಶ್ರೀಗಳು ಚಾಲನೆ ನೀಡಿದರು. ಕಾದ ಕಬ್ಬಿಣದ ಮೇಲೆ […]

Continue Reading

ನಿರಂತರ ಜ್ಞಾನ ದೀಪೋತ್ಸವದಿಂದ ದೇಶ ಪ್ರಜ್ವಲ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಒಂದು ದೀಪದಿಂದ ಸಾವಿರ ದೀಪಗಳು ಹೊತ್ತಿಕೊಳ್ಳುವಂತೆ ಒಬ್ಬ ಸಾಧಕ ಅಸಂಖ್ಯಾತ ಯುವ ಮನಸ್ಸುಗಳಿಗೆ ಪ್ರೇರಣೆಯಾಗಬಲ್ಲರು. ಇಂಥ ಜ್ಞಾನ ದೀಪೋತ್ಸವ ನಿರಂತರವಾದಾಗ ಇಡೀ ದೇಶ ಪ್ರಜ್ವಲಿಸಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಭಾನುವಾರ ಆಯೋಜಿಸಿದ್ದ ‘ಸಾಧನೆಯ ಮಾರ್ಗ’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಅತ್ಯಂತ ಕಿರಿಯ ವಯಸ್ಸಿನಲ್ಲೇ ಮಹತ್ಸಾಧನೆ ಮಾಡಿ ದೇಶ ಹಾಗೂ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ.ಕಾರ್ತಿಕ್ ಹೆಗಡೆಕಟ್ಟಿ […]

Continue Reading

ಪ್ರಧಾನಿ ಕಚೇರಿಯ ಉಪ ಕಾರ್ಯದರ್ಶಿ ಡಾ.ಕಾರ್ತಿಕ ಹೆಗಡೆಕಟ್ಟೆ ಜತೆ ಸಂವಾದ ನಾಳೆ

ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಈ ತಿಂಗಳ 30ರಂದು ಭಾನುವಾರ ಬೆಳಿಗ್ಗೆ 11.45ರಿಂದ “ಸಾಧನೆಯ ಮಾರ್ಗ” ಎಂಬ ಅಂತರ್ಜಾಲ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಉಪ ಕಾರ್ಯದರ್ಶಿ, ಉತ್ತರ ಕನ್ನಡ ಮೂಲದ ಪ್ರತಿಭಾವಂತ ಯುವ ಐಎಎಸ್ ಅಧಿಕಾರಿ ಡಾ.ಕಾರ್ತಿಕ ಹೆಗಡೆಕಟ್ಟೆ ಅವರು ‘ಸಾಧನೆಯ ಮಾರ್ಗ’ ವಿಷಯದ ಬಗ್ಗೆ ವಿಚಾರ ಮಂಡಿಸುವರು. ವಿದ್ಯಾ ಪರಿಷತ್ ಅಧ್ಯಕ್ಷ ಎಂ.ಆರ್.ಹೆಗಡೆ, ಆಡಳಿತಾಧಿಕಾರಿ ಸುರೇಂದ್ರ ಹೆಗಡೆ ಮತ್ತಿತರರು ಭಾಗವಹಿಸುವರು. […]

Continue Reading

ಕಲಿಕೆ ಜ್ಞಾನಮಯ, ಆನಂದಮಯವಾದರೆ ವಿದ್ಯೆ ಸಾರ್ಥಕ: ರಾಘವೇಶ್ವರ ಶ್ರೀ

ಗೋಕರ್ಣ: ಕಲಿಕೆ ಜ್ಞಾನಮಯ ಮತ್ತು ಆನಂದಮಯವಾಗಿದ್ದಾಗ ಮಾತ್ರ ವಿದ್ಯೆ ಸಾರ್ಥಕವಾಗುತ್ತದೆ ಎಂದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಆಯೋಜಿಸಿದ್ದ ‘ಆತಂಕದ ಪರಿಸ್ಥಿತಿಯಲ್ಲಿ ಧನಾತ್ಮಕವಾಗಿ ಯೋಚಿಸಲು ಸರಳ ಸೂತ್ರಗಳು’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಇಂದಿನ ಶಿಕ್ಷೆ ಜ್ಞಾನ ಮತ್ತು ಭೀತಿಯಿಂದ ಕೂಡಿದೆ. ಈ ಪರಿಸ್ಥಿತಿ ಬದಲಾಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಪರೀಕ್ಷೆಯನ್ನು ಸ್ವೀಕಾರ ಮಾಡುವಂತಿರಬೇಕು; ಮಗು ಖುಷಿ ಖುಷಿಯಾಗಿದ್ದಷ್ಟೂ […]

Continue Reading

ಅರ್ಥಶಾಸ್ತ್ರ ಭವಿಷ್ಯಕ್ಕೆ ಅರ್ಥ ನೀಡುವಂಥದ್ದು: ರಾಘವೇಶ್ವರ ಶ್ರೀ

ಗೋಕರ್ಣ: ಅರ್ಥಶಾಸ್ತ್ರದ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅರ್ಥ ನೀಡುವಂತಿರಬೇಕು; ಜತೆಗೆ ದೇಶಕ್ಕೆ ಅರ್ಥ ಕೊಡುವ, ದೇಶದ ಸಂಪತ್ತಾಗಿ ರೂಪುಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಸಿಎ, ಸಿಎಸ್ ಫೌಂಡೇಷನ್‍ಗಾಗಿ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಉಚಿತ ಆನ್‍ಲೈನ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸಿಎ, ಸಿಎಸ್ ತರಬೇತಿ ಬೇಕು ಎಂಬ ಬೇಡಿಕೆ ಬಂದದ್ದು ವಿವಿವಿ ಗುರುಕುಲದ ವಿದ್ಯಾರ್ಥಿಗಳಿಂದ. ಮಕ್ಕಳು ಹಾಗೂ ಗೋವುಗಳು ದೇವರಿಗೆ ಸಮಾನ. ವಿದ್ಯಾರ್ಥಿಗಳ ಒತ್ತಾಸೆಯನ್ನು ಈಡೇರಿಸುವುದು ಕರ್ತವ್ಯ […]

Continue Reading

ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ವಿವಿವಿ ಆನ್‍ಲೈನ್ ತರಬೇತಿ

ಗೋಕರ್ಣ: ಸಿಇಟಿ, ನೀಟ್, ಕೆವಿಪಿವೈ, ಎನ್‍ಇಎಸ್‍ಟಿ, ಜೆಇಇ ಮತ್ತಿತರ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆನ್‍ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯವರಿಗೆ ಕೂಡಾ ಗುಣಮಟ್ಟದ ತರಬೇತಿ ದೊರಕಬೇಕು ಎಂಬ ಉದ್ದೇಶದಿಂದ ಆರಂಭಿಸಲಾದ ತರಬೇತಿ ಈ ತಿಂಗಳ 18ರಂದು ಉದ್ಘಾಟನೆಗೊಳ್ಳಲಿದೆ. ಪ್ರಥಮ ಪಿಯುಸಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ಮುಕ್ತವಾಗಿರುತ್ತದೆ. ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳು ಎಂಬಿಬಿಎಸ್, ಐಐಟಿ, ಎನ್‍ಐಟಿ, ಐಐಎಸ್‍ಇಎಆರ್, ಎನ್‍ಐಎಸ್‍ಇಎಆರ್, ಎನ್‍ಎಟಿಎ, ಎಂಜಿನಿಯರಿಂಗ್ ಕೋರ್ಸ್‍ಗಳಿಗೆ ಸೇರಲು […]

Continue Reading

ವಿಷ್ಣುಗುಪ್ತ ವಿಶ್ವವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

  ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕøತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ ಆರಂಭಿಸಿರುವ ಗುರುಕುಲಗಳಿಗೆ ಸಮಾಜದಿಂದ ಅದ್ಭುತ ಸ್ಪಂದನೆ ವ್ಯಕ್ತವಾಗಿದ್ದು, ಬೆಳೆಯುವ ಕುಡಿಗಳ ಉತ್ಸಾಹದಿಂದ ಸ್ಫೂರ್ತಿ ಪಡೆದು ಹಾಲಕ್ಕಿ ಸಂಸ್ಕøತಿಯ ಸಂರಕ್ಷಣೆ ಮತ್ತು ಸಂವರ್ಧನೆ ಉದ್ದೇಶದಿಂದ ಹಾಲಕ್ಕಿ ಗುರುಕುಲ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಮುಕ್ರಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದ […]

Continue Reading