ಭಾವ, ರಾಗ, ತಾಳ ಮೇಳೈಸಿದರೆ ಜೀವನ ಆಹ್ಲಾದಕರ: ರಾಘವೇಶ್ವರ ಶ್ರೀ
ಗೋಕರ್ಣ: ಭಾವ, ರಾಗ, ತಾಳ ಮೇಳೈಸಿದಾಗ ಸಂಗೀತ ಹೇಗೆ ಸುಶ್ರಾವ್ಯವಾಗುವುದೋ ಜೀವನ ಆಹ್ಲಾದಕರ ಆಗಬೇಕಾದರೆ ಮನಸ್ಸು, ಮಾತು ಮತ್ತು ಕೃತಿ ಒಂದಾಗಬೇಕು ಎಂದು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಶುಕ್ರವಾರ ಅಶೋಕೆಯ ವಿದ್ಯಾವಿಶ್ವ ಸಭಾಂಗಣದಲ್ಲಿ ಆಯೋಜಿಸಿದ್ದ ಭಾವಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಜೀವನ ಕೂಡಾ ಒಂದು ಸಂಗೀತ. ಜೀವನ ಮುನ್ನಡೆಯಬೇಕಾದರೆ ಅಂದರೆ ಜೀವನದಲ್ಲಿ ‘ಭರತ’ ಬರಬೇಕಾದರೆ ಭಾವ, ರಾಗ ಹಾಗೂ ತಾಳ ಅಗತ್ಯ. […]
Continue Reading