ಮಕ್ಕಳ ಕಲಿಕೆಗೆ ಉತ್ತಮ ಪರಿಸರ, ಸಂಸರ್ಗ ಅಗತ್ಯ; ರಾಘವೇಶ್ವರ ಶ್ರೀ
ಕಾರವಾರ: ಗುಣ- ದೋಷಗಳೆರಡಕ್ಕೂ ಸಹವಾಸವೇ ಕಾರಣ. ಆದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಪರಿಸರ ಮತ್ತು ಉತ್ತಮ ಸಂಸರ್ಗ ಕಲ್ಪಿಸುವ ಮೂಲಕ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪುಗೊಳಿಸುವ ಅಗತ್ಯವಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಗುರುಕುಲಗಳ ವಿದ್ಯಾರಂಭ ಸಮಾರಂಭದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ರಾಮಾಯಣದ ರಾಮ ಅಭಯ ಸ್ತೋತ್ರವನ್ನು ಆನ್ಲೈನ್ ಮೂಲಕ ಗುರುಕುಲದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ವಿದ್ಯಾರಂಭಕ್ಕೆ ಶ್ರೀಗಳು ಚಾಲನೆ ನೀಡಿದರು. ಕಾದ ಕಬ್ಬಿಣದ ಮೇಲೆ […]
Continue Reading