ಕಂಬಳಬೆಟ್ಟು ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ನಂತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ. ಪ್ರಾ. ಶಾಲೆಯಲ್ಲಿ ರವಿವಾರ ಉದ್ಘಾಟಿಸಲಾಯಿತು. ಧರ್ಮನಗರ ಧರ್ಮ ಸೇವಾ ವಿಶ್ವಸ್ಥ ಮಂಡಳಿಯ ಸಂಚಾಲಕ ಕೆ.ಟಿ.ವೆಂಕಟೇಶ್ವರ ಭಟ್ ನೂಜಿ ಉದ್ಘಾಟಿಸಿ, ಮಾತನಾಡಿ, ಮಹಾತ್ಮಾ ಗಾಂಧಿಜಿಯವರ 100ನೇ ಜನ್ಮದಿನದಂದು ಈ ರಾಷ್ಟ್ರೀಯ ಸೇವಾ ಯೋಜನೆಯನ್ನು ಆರಂಭಿಸಲಾಯಿತು. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿಯನ್ನು ಬೆಳೆಸುವ […]
Continue Reading