ಭಾರತೀ ಎಜುಕೇಶನ್ ಟ್ರಸ್ಟ್ : ಸ್ಕಾಲರ್‌ಶಿಪ್ ವಿತರಣೆ  

ಶಿಕ್ಷಣ

ನಂತೂರು : ಮಂಗಳೂರು ಹವ್ಯಕ ಸಭಾ ಪ್ರಾಯೋಜಿತ ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್ ವತಿಯಿಂದ ಮಂಗಳೂರು ನಂತೂರು ಪದವು ಶ್ರೀ ಭಾರತೀ ಸಮೂಹ ಸಂಸ್ಥೆಗಳ 6 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಯಿತು.

 

ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಶ್ರೀ ಶ್ಯಾಮಸುಂದರ ಭೀಮಗುಳಿ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಶ್ರೀ ಭಾರತೀ ಸಮೂಹ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಗುತ್ತಿದೆ. ಈ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ಶ್ರೀಮತಿ ವಸಂತಿ ಎಸ್.ಭಟ್ಟ, ಕಾಲೇಜು ಸೇವಾ ಸಮಿತಿ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಎಂ.ಟಿ.ಭಟ್ಟ, ಪ್ರಾಂಶುಪಾಲ ಡಾ.ಈಶ್ವರಪ್ರಸಾದ್ ಆಲಂಗಾರು, ಪಿಯುಸಿ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.

 

ಉಪನ್ಯಾಸಕಿ ಕು. ರಮ್ಯಾ ಸ್ವಾಗತಿಸಿ, ನಿರೂಪಿಸಿದರು. ವಿದ್ಯಾರ್ಥಿ ಶ್ರೀ ವೆಂಕಟೇಶ್ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಕು. ಶ್ವೇತಾ ವಂದಿಸಿದರು.

Leave a Reply

Your email address will not be published. Required fields are marked *