ಶ್ರೀಭಾರತೀಗುರುಕುಲಂನಲ್ಲಿ ಕಾರ್ಯಾಗಾರ: ಬಾಹ್ಯಾಕಾಶ ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ

ಹೊಸನಗರ: ಶ್ರೀರಾಮಚಂದ್ರಾಪುರಮಠದ ಶ್ರೀಭಾರತೀಗುರುಕುಲಂನಲ್ಲಿ, ಬಾಹ್ಯಾಕಾಶ ಮತ್ತು ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಬಗ್ಗೆ ನಿವೃತ್ತ ಇಸ್ರೋ ನಿರ್ದೇಶಕರಾದ ಶ್ರೀ ಡಾ. ಪಿ. ಜೆ. ಭಟ್ಟರು ಎರಡು ದಿನಗಳ ಕಾರ್ಯಾಗಾರ ನಡೆಸಿದರು.   ಕಾರ್ಯಾಗಾರದ ಅಂತ್ಯದಲ್ಲಿ ಮಕ್ಕಳ ಸಂಶಯಗಳನ್ನು‌ ನಿವಾರಿಸಿ, ಮಕ್ಕಳಿಗೆ ರಸಪ್ರಶ್ನೆ ನಡೆಸಿ, ಉತ್ತರಿಸಿದವರನ್ನು ಪುರಸ್ಕರಿಸಿದರು. ಬಳಿಕ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮಿತಾಂಡವೇಶ್ವರ ಮೈಸೂರು ಅತಿಥಿಯಾಗಿ ಭಾಗವಹಿಸಿದರು.  

Continue Reading

ಸಾಧಕರಿಗೆ ಶ್ರೀಸಂಸ್ಥಾನದವರಿಂದ ವಿಶೇಷ ಅನುಗ್ರಹ

  ಬೆಂಗಳೂರು: ಹವ್ಯಕ ಮಹಾಮಂಡಲದ ವತಿಯಿಂದ ದಿನಾಂಕ 16-12-2018ರಂದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಶ್ರೀಸಂಸ್ಥಾನದವರು ಆಶೀರ್ವದಿಸಿದರು. ಯೋಗ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ಸಂಧ್ಯಾ ಎನ್. ಭಟ್ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶ್ರೀಸಂಸ್ಥಾನದವರಿಂದ ವಿಶೇಷ ಅನುಗ್ರಹವನ್ನು ಪಡೆದುಕೊಂಡರು. ದಕ್ಷಿಣ ಬೆಂಗಳೂರು ಮಂಡಲಾಂತರ್ಗತ ಸರ್ವಧಾರಿ ವಲಯದ ಶ್ರೀ ಪಟ್ಣಡ್ಕ ನಾರಾಯಣ ಭಟ್ ಇವರ ಪತ್ನಿ (ಪುತ್ತೂರಿನ ಮಾಜಿ ಶಾಸಕ ಹಿರಿಯ ಮುಖಂಡ ಉರಿಮಜಲು ರಾಮ ಭಟ್ ಅವರ ಪುತ್ರಿ) ಶ್ರೀಮತಿ ಸಂಧ್ಯಾ ಎನ್. ಭಟ್ ಹಲವಾರು ರಾಜ್ಯ ಮಟ್ಟದ ಹಾಗೂ ರಾಷ್ಟ್ರ […]

Continue Reading

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅನುಗ್ರಹ

  ಬೆಂಗಳೂರು: ಹವ್ಯಕ ಮಹಾಮಂಡಲದ ವಿದ್ಯಾರ್ಥಿವಾಹಿನೀ ವಿಭಾಗದ ವತಿಯಿಂದ ದಿನಾಂಕ 16.12.2018ರಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಶ್ರೀಸಂಸ್ಥಾನದವರಿಂದ ಅನುಗ್ರಹ ಪೂರ್ವಕ ಪ್ರತಿಭಾ ಪುರಸ್ಕಾರವನ್ನು ಪಡೆದರು.   ಶ್ರೀರಾಮಚಂದ್ರಾಪುರ ಮಂಡಲಾಂತರ್ಗತ ತೀರ್ಥರಾಜಪುರ ವಲಯದ ಶ್ರೀಮತಿ ಸೌಮ್ಯಾ ಪಿ. ವಿ. ಹಾಗೂ ಶ್ರೀ ಡಾ. ಸುರೇಶ್ ಕುಮಾರ್ ಇವರ ಪುತ್ರಿ ಕು. ಯಾಮಿನೀ ಭಟ್ ಎಂಜಿನಿಯರಿಂಗ್ ಪದವಿಯಲ್ಲಿ ಎರಡು ಸ್ವರ್ಣ ಪದಕಗಳನ್ನು ಗಳಿಸಿ ವಿಶೇಷ ಸಾಧನೆಗೈದಿದ್ದಾರೆ. ಮುಳ್ಳೇರಿಯ ಮಂಡಲಾಂತರ್ಗತ ಎಣ್ಮಕಜೆ ವಲಯದ ಶ್ರೀಮತಿ ಸುಮಿತ್ರಾ ಪಿ. […]

Continue Reading

ಶ್ರೀಭಾರತೀವಿದ್ಯಾಲಯದಲ್ಲಿ ಏಕಾಗ್ರತೆ ಮತ್ತು ಓದುವ ಕೌಶಲಗಳ ಬಗ್ಗೆ ಕಾರ್ಯಗಾರ

ಬೆಂಗಳೂರು: ಶ್ರೀರಾಮಚಂದ್ರಾಪುರಮಠದ DCS ವಿದ್ಯಾಸಂಸ್ಥೆಗಳಲ್ಲೊಂದಾದ ಬೆಂಗಳೂರಿನ ಶ್ರೀಭಾರತೀ ವಿದ್ಯಾಲಯದ ೯ ಮತ್ತು ೧೦ ನೆಯ ತರಗತಿಯ ವಿದ್ಯಾರ್ಥಿಗಳಿಗೆ “ಏಕಾಗ್ರತೆ ಮತ್ತು ಓದುವ ಕೌಶಲಗಳು” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಜಯಗೌರಿಯವರು ಈ ಕಾರ್ಯಗಾರವನ್ನು ನಡೆಸಿಕೊಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.  

Continue Reading

ಪ್ರೇರಣಾ ಕಾರ್ಯಾಗಾರ : ಪ್ರಶಾಂತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಮಂಗಳೂರು: ನಂತೂರು ಶ್ರೀಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ, ಪ್ರೇರಣಾದ ವತಿಯಿಂದ 4.12.2018ರಂದು ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದ 10ನಯ ತರಗತಿಯ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗಳಲ್ಲಿ ಧನಾತ್ಮಕ ಉತ್ತರಿಸುವಿಕೆ’ ವಿಷಯದ ಬಗ್ಗೆ ಕಾರ್ಯಾಗಾರ ನಡೆಸಿ ಪರೀಕ್ಷೆ ಎದುರಿಸುವ ಬಗ್ಗೆ ಮಾರ್ಗದರ್ಶನ ನೀಡಯಿತು.   ಪ್ರೇರಣಾ ಸಂಯೋಜಕ ಶ್ರೀ ಯು. ಎಸ್. ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸರಳತೆಯಿಂದ ಕ್ಲಿಷ್ಟತೆಯೆಡೆಗೆ; ಉತ್ತೀರ್ಣನಾಗುವೆನೆಂಬ ಮಾನಸಿಕತೆ; ಉತ್ತರ ಗೊತ್ತಿರುವ ಪ್ರಶ್ನೆಗಳಿಂದ ಉತ್ತರಿಸತೊಡಗುವುದು; ಎಲ್ಲ ಪ್ರಶ್ನೆಗಳಿಗೂ ಉತ್ತರಗಳನ್ನು ಬರೆಯಲು ಯತ್ನಿಸುವುದು ಮುಂತಾದ […]

Continue Reading

ಶ್ರೀಭಾರತೀ ಗುರುಕುಲಂನಲ್ಲಿ ವಿಶೇಷ ಕಾರ್ಯಕ್ರಮ-ನಾಟಕ

ಗುರುಕುಲದಿಂದ ಅರ್ಜಿಸಿದ ಶಿಕ್ಷಣವನ್ನು ಜೀವನದಲ್ಲಿ ಬಳಸಿಕೊಳ್ಳುವಂತೆ ಶ್ರೀರಾಮಚಂದ್ರಾಪುರಮಠದ ಶ್ರೀಭಾರತೀ ಗುರುಕುಲಂ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಸಹಪ್ರಾಧ್ಯಾಪಕ ಡಾ. ಮಂಜುನಾಥ ಭಟ್ಟ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ತಮ್ಮ ಮಗಳ ಜನ್ಮದಿನದ ಅಂಗವಾಗಿ ಅವರು ವಿಶೇಷ ದೇಣಿಗೆಯನ್ನು ನೀಡಿದರು.   ಮಾಲೂರು ನಿವಾಸಿ ಶ್ರೀಮತಿ ವಸುಂಧರಾ ಅರವಿಂದ ಒಂದುವಾರದ ಕರಕುಶಲ ಪ್ರಶಿಕ್ಷಣ ನೀಡಿದರು.   ಪ್ರತಿಭಾನು ಸಭೆಯ ಪ್ರಯುಕ್ತ ಸುಶಾಖಾ ವೃಂದದ ವಿದ್ಯಾರ್ಥಿಗಳು ‘ಮೂರ್ತಿಪೂಜೆಯ ರಹಸ್ಯ’ ಎಂಬ ನಾಟಕವಾಡಿದರು. ಅಂಕುರ ವೃಂದದ ವಿದ್ಯಾರ್ಥಿನಿಯರು ‘ಒನಕ್ಕೆ ಓಬವ್ವ’ ಎಂಬ ನಾಟಕ ಪ್ರದರ್ಶಿಸಿದರು.

Continue Reading

ಭಾನ್ಕುಳಿ: ಅಂಬಾರವದೊಂದಿಗೆ ಚಿಣ್ಣರ ಚಿಲಿಪಿಲಿಯೂ‌ ಇಂದು‌ ಗೋಸ್ವರ್ಗದಲ್ಲಿ ಮಾರ್ದನಿಸಿತು

ಮೂರೂರಿನ ಪ್ರಗತಿ ವಿದ್ಯಾಲಯದ, ಎರಡರಿಂದ ಐದನೇ ತರಗತಿಯ ವರೆಗಿನ ಒಂದುನೂರ ಐವತ್ತು ಮಕ್ಕಳು ಪ್ರವಾಸಕ್ಕಾಗಿ ಗೋಸ್ವರ್ಗಕ್ಕೆ ಇಂದು ಆಗಮಿಸಿದರು. ಪುಟಾಣಿಗಳು ಸ್ವರ್ಗಸೌಂದರ್ಯವನ್ನೂ, ಗೋವು-ಕರುಗಳ‌‌ ಒಡನಾಟವನ್ನೂ ಆಸ್ವಾದಿಸಿ ಸಂಭ್ರಮಿಸಿದರು.

Continue Reading

ಗೋಸ್ವರ್ಗದಲ್ಲಿ ಯೋಗ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ : ಶ್ರೀರಾಮಸೇನೆ ನೇತೃತ್ವದಲ್ಲಿ ಏಳು ದಿನಗಳ ಶಿಬಿರ

ಭಾನ್ಕುಳಿ: ಶ್ರೀರಾಮಸೇನೆಯ ನೇತೃತ್ವದಲ್ಲಿ, ಗೋಸ್ವರ್ಗದಲ್ಲಿ, 2.12.2018ರಿಂದ ಏಳು ದಿನಗಳ ಕಾಲ ‘ಯೋಗ ಮತ್ತು ವ್ಯಕ್ತಿತ್ವ ವಿಕಸನ’ ತರಬೇತಿ ಶಿಬಿರವು ನಡೆಯಲಿದೆ. ಈ ಶಿಬಿರವನ್ನು ಉದ್ಘಾಟಿಸಿದ ಶ್ರೀ ಪ್ರಮೋದ ಮುತಾಲಿಕ್ ಗೋಸ್ವರ್ಗದಲ್ಲಿ ವಿಹರಿಸಿ, ಗೋಸ್ವರ್ಗದ ಬಗ್ಗೆ ಮಾಹಿತಿ ಪಡೆದುಕೊಂಡರು.

Continue Reading

ಮಾಲೂರು ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಭಾಷಣ ಕಾರ್ಯಾಗಾರ ಯಶಸ್ವಿಯಾಗಿ ಸಂಪನ್ನ

ಮಾಲೂರು: ಭಾರತೀಯ ಗೋಪರಿವಾರ-ಕರ್ನಾಟಕದ ಗೋಮಹತಿ ವಿಭಾಗದಿಂದ ಒಂದು ದಿನದ ಭಾಷಣ ಕಾರ್ಯಗಾರವು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗಂಗಾಪುರದ ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ನಡೆಯಿತು.   ಗೋಪೂಜೆ ಹಾಗೂ ಗೋಗ್ರಾಸ ನೀಡುವುದರೊಂದಿಗೆ ಶಿಬಿರವು ಆರಂಭವಾಯಿತು. ಬಳಿಕ ನಡೆದ ಕಾರ್ಯಾಗಾರದಲ್ಲಿ ಭಾರತೀಯ ಗೋಪರಿವಾರ, ಕರ್ನಾಟಕದ ಗೋಮಹತಿ ವಿಭಾಗದ ರಾಜ್ಯಾಧ್ಯಕ್ಷ ಶ್ರೀ ನಿತ್ಯಾನಂದ ವಿವೇಕವಂಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರ ಶ್ರೀ ನಿತ್ಯಾನಂದ ವಿವೇಕವಂಶಿ, ಡಾ.ರವಿ ಪಾಂಡವಪುರ ಹಾಗೂ ಚಂದನ್ ಕಲಾಹಂಸ ಗೋವಿನ ಮಹತ್ತ್ವ ಮತ್ತು ಭಾಷಣ ತರಬೇತಿಯನ್ನು ನಡೆಸಿಕೊಟ್ಟರು. ಬಳಿಕ ಗೋಶಾಲೆಗೆ […]

Continue Reading

ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಗತಿ ವಿದ್ಯಾಲಯದ ಪ್ರತಿಭೆಗಳ ಸಾಧನೆ

ಮೂರೂರು: ಅಂಕೋಲಾದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಮೂರೂರು ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ‌ ಸಾಧನೆ ತೋರಿದ್ದಾರೆ.   ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಸೃಜನ್ ನಾಯ್ಕ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾನೆ.   ಪ್ರೌಢಶಾಲಾ ವಿಭಾಗದಲ್ಲಿ ಕುಮಾರಿ ಅಶ್ವಿನಿ ಭೈರವ್ ಹೆಗಡೆ ನೀಲ್ಕೋಡ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.   ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಅಧ್ಯಾಪಕರು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ,ಸಿಬ್ಬಂದಿ ಶುಭಕೋರಿ […]

Continue Reading

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ಕ್ರೀಡೋತ್ಸವ

ಮೂರೂರು: ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನವೆಂಬರ್ 27 ಮತ್ತು 28ರಂದು ಎರಡು ದಿನಗಳ ಕ್ರೀಡೋತ್ಸವ ಜರುಗಿತು.   27ರಂದು ಆಡಳಿತ ಮಂಡಳಿಯ ಸದಸ್ಯ ಶ್ರೀ ಟಿ. ಆರ್. ಜೋಷಿ ಕ್ರೀಡೋತ್ಸವವನ್ನು ಉದ್ಘಾಟಿಸಿ, ಮಾತನಾಡಿ, ಮಕ್ಕಳೆಲ್ಲರೂ ಸ್ಪರ್ಧಾತ್ಮಕ ಮನೋಭಾವ ಮತ್ತು ಸಂಭ್ರಮದಿಂದ ಭಾಗವಹಿಸಬೇಕು ಎಂದು ಹೇಳಿದರು.   ಕ್ರೀಡೋತ್ಸವದಲ್ಲಿ ಓಟ, ಚಕ್ರ ಎಸೆತ, ಗುಂಡೆಸೆತ, ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ಕಬಡ್ಡಿಗಳನ್ನು ಆಯೋಜಿಸಲಾಗಿತ್ತು.   ಪ್ರಾಥಮಿಕ ಶಾಲೆ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ […]

Continue Reading

ಪ್ರತಿಭಾ ಪುರಸ್ಕಾರ : ಜರ್ಮನಿಯಲ್ಲಿ ಪ್ರಬಂಧ ಮಂಡಿಸಿದ ಮೈತ್ರೇಯ ಹೆಗಡೆಗೆ ಶ್ರೀಸಂಸ್ಥಾನದವರಿಂದ ಆಶೀರ್ವಾದ

ಬೆಂಗಳೂರು: ಶ್ರೀಗಿರಿನಗರ ವಲಯದ ಕುಮಾರ ಮೈತ್ರೇಯ ಹೆಗಡೆ ಜರ್ಮನಿಯಲ್ಲಿ ನಡೆದ ಇಂಟರ್ ನ್ಯಾಷನಲ್ ಆಸ್ಟ್ರೋನಾಟಿಕಲ್ ಕಾಂಗ್ರೆಸ್ ನಲ್ಲಿ ಭಾಗವಹಿಸಿ ‘ಬಿಹೆವಿಯರ್ ಆಫ್ ಬ್ಯಾಕ್ಟೀರಿಯಾ ಇನ್ ಸ್ಪೇಸ್’ ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದಾರೆ. ಈ ಸಾಧನೆಗಾಗಿ ಶ್ರೀಸಂಸ್ಥಾನದವರರ ವಿಶೇಷ ಆಶೀರ್ವಾದಕ್ಕೆ ಕುಮಾರ ಮೈತ್ರೇಯ ಪಾತ್ರರಾದರು. ಕುಮಾರ ಮೈತ್ರೇಯ ಹೆಗಡೆ, ಹವ್ಯಕ ಮಾಸಪತ್ರಿಕೆ ಸಂಪಾದಕ ಶ್ರೀಕಾಂತ ಹೆಗಡೆ ಅಂತ್ರವಳ್ಳಿ ಹಾಗೂ ಶ್ರೀಮತಿ ಕಮಲಿನಿ ಹೆಗಡೆ ಅಂತ್ರವಳ್ಳಿ ದಂಪತಿ ಪುತ್ರ.  

Continue Reading

ಮಕ್ಕಳಿಂದ ಮಾತಾಪಿತರಿಗೆ ಪೂಜೆ : ಶ್ರೀಭಾರತೀ ವಿದ್ಯಾಪೀಠದಲ್ಲಿ ಮಾದರಿ ಕಾರ್ಯಕ್ರಮ

ಮುಜುಂಗಾವು: ಇಲ್ಲಿನ ಶ್ರೀಭಾರತೀ ವಿದ್ಯಾಪೀಠದ ಮಕ್ಕಳಿಂದ ಮಾತಾಪಿತೃ ಪೂಜೆ ನೆರವೇರಿತು. ವಿದ್ಯಾಪೀಠ ಶಾಲೆಯಲ್ಲಿ 26.11.2018ರ ಸೋಮವಾರರಂದು ನಡೆದ ಕಾರ್ಯಕ್ರಮವು ದೀಪಪ್ರಜ್ವಲನ, ಗಣಪತಿ ಸ್ತುತಿ, ಗುರುವಂದನೆಗಳೊಂದಿಗೆ ಆರಂಭವಾಯಿತು. ಬಳಿಕ ಮಕ್ಕಳು ಅವರವರ ಮಾತಾಪಿತೃಗಳಿಗೆ ಆರತಿ ಅಕ್ಷತೆಯೊಂದಿಗೆ ಪೂಜೆ ನೆರವೇರಿಸಿದರು. ಅನಂತರ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ಮಾತನಾಡಿದ ಆಡಳಿತಾಧಿಕಾರಿ ಶ್ರೀ ಶ್ಯಾಮ ಭಟ್ ದರ್ಬೆಮಾರ್ಗ, ‘ಇಳೆಗೆ ಇಳಿಸಿದ ನಮ್ಮ ಮಾತಾಪಿತರು ಜಗತ್ತಿನ ತಂದೆತಾಯಿಯರಾದ ಪಾರ್ವತಿಪರಮೇಶ್ವರರಿಗೆ ಸಮಾನರು. ವೃದ್ಧಾಪ್ಯದಲ್ಲಿ ಅವರ ಬೇಕುಬೇಡಗಳನ್ನು ನಾವು ಪೂರೈಸಿ ಸೇವೆಯನ್ನು ಮಾಡಬೇಕು’ ಎಂದು ಕಿವಿಮಾತು […]

Continue Reading

ಪ್ರಧಾನಮಠದಲ್ಲಿ ವಿದ್ಯಾಸಹಾಯನಿಧಿ ವಿತರಣೆ ಕಾರ್ಯಕ್ರಮ

ರಾಮಚಂದ್ರಾಪುರ (ಹೊಸನಗರ) : ಶ್ರೀಮಠವು ಧಾರ್ಮಿಕಕಾರ್ಯಗಳಿಗೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳ ಶೈಕ್ಷಣಿಕ ಉದ್ದೇಶಕ್ಕೆಆರ್ಥಿಕ ನೆರವು ನೀಡುವುದರಲ್ಲೂ ಯಾವಾಗಲೂ ಮುಂದು ಎಂದು ಮಂಡಲ ಅಧ್ಯಕ್ಷ ರಮೇಶ ಗುಂಡೂಮನೆ ಹೇಳಿದರು.   ಹೊಸನಗರದ ಪ್ರಧಾನ ಮಠದಲ್ಲಿ ೨೫-೧೧-೨೦೧೮ (ಭಾನುವಾರ)ರಂದು ನಡೆದ ವಿದ್ಯಾಸಹಾಯ ನಿಧಿ 2018- 19ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ವಿದ್ಯಾಸಹಾಯ ನಿಧಿಯು ಹಣಕಾಸಿನ ನೆರವು ಮಾತ್ರವಲ್ಲದೇ ಬದುಕಿಗೆ ಬೆಳಕು ನೀಡುವ ಅನುಗ್ರಹವೂ ಆಗಿದೆ’ ಎಂದರು. ವಿದ್ಯಾರ್ಥಿಗಳು ಸಮಾಜ ಗೌರವಿಸುವ ಸ್ಥಾನವನ್ನು ಸಂಪಾದಿಸಿ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಕಿವಿಮಾತು […]

Continue Reading

ಮೂರೂರು ಶಾಲೆ ವಿದ್ಯಾರ್ಥಿಯ ಸಾಧನೆ : ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಜ್ಯಕ್ಕೆ‌ ಪ್ರಥಮ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಮಟಾ : ಮೂರೂರಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಕುಮಾರ ಅಭಿ ಆರ್. ಅಡಿಗುಂಡಿ ರಾಜ್ಯಮಟ್ಟದ ಚಕ್ರ ಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.   ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನ.21, 22ರಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕು. ಅಭಿ 39.75 ಮೀಟರ್ ದೂರ ಚಕ್ರ ಎಸೆಯುವುದರೊಂದಿಗೆ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾನೆ. […]

Continue Reading

ಬದಿಯಡ್ಕದ ಶ್ರೀಭಾರತೀ ವಿದ್ಯಾಪೀಠದಲ್ಲಿ ಮಾತಾಪಿತೃ ಪೂಜೆ : ಹೆತ್ತವರ ಸೇವೆಗೆ ಪ್ರತಿಜ್ಞಾಬದ್ಧರಾದ ಮಕ್ಕಳು – ಭಾವುಕರಾದ ಹೆತ್ತವರು

ಬದಿಯಡ್ಕ: ನವೆಂಬರ್ 23ರಂದು ಇಲ್ಲಿನ ಶ್ರೀಭಾರತೀ ವಿದ್ಯಾಪೀಠ ಶಾಲೆಯಲ್ಲಿ ಮಾತಾಪಿತೃ ಪೂಜೆಯು ಭಕ್ತಿ-ಶ್ರದ್ಧೆಗಳಿಂದ ನೆರವೇರಿತು.   ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪೂಜಾ ವಿಧಾನಗಳ ಬಗ್ಗೆ ತಿಳಿಸಿ ಮಕ್ಕಳಿಂದ ಪಾಲಕರ ಪಾದ ಪೂಜೆ ನೆರವೇರಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಮಕ್ಕಳು ‘ತಂದೆ-ತಾಯಿ ನಮ್ಮ‌ ಕಣ್ಣಿಗೆ ಕಾಣುವ ದೇವರು. ಅವರ ಆಶೀರ್ವಾದದಿಂದ ಜೀವನದಲ್ಲಿ ಏನು ಬೇಕಾದರೂ ಸಾಧಿಸಲು ಸಾಧ್ಯ. ನಾವು ಹೆತ್ತವರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೇವೆ.’ ಎಂದು ಹೆತ್ತವರ ಪಾದಸ್ಪರ್ಶಿಸಿ ಪ್ರತಿಜ್ಞೆಗೈದರು. ಈ ಸಂದರ್ಭದಲ್ಲಿ ಹೆತ್ತವರು […]

Continue Reading

ವಿದ್ಯಾರ್ಥಿಗಳಿಗೆ ಕಾರ್ಯಾಗಾರ : ಪರೀಕ್ಷೆ ಎದುರಿಸುವ ವಿಧಾನ – ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ

ನಲ್ಯಪದವು: ಪಠ್ಯವನ್ನು ಮನನ ಮಾಡಿಕೊಳ್ಳುವ ಹಾಗೂ ಪರೀಕ್ಷೆಯನ್ನು ಎದುರಿಸುವ ವಿಧಾನಗಳು, ಹತ್ತನೆಯ ತರಗತಿಯ ಅನಂತರ ಎದುರಿಸುವ ಸವಾಲುಗಳು ಹಾಗೂ ಅವಕಾಶಗಳ ಬಗ್ಗೆ ಸಂಸ್ಥೆಯ ಶಿಕ್ಷಣ ಸಂಯೋಜಕರಾದ ಪ್ರೊ. ವಿಶ್ವೇಶ್ವರ ಭಟ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.   ಶ್ರೀಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾದಿಂದ ನಲ್ಯಪದವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಯಾವುದೇ ರೀತಿಯಲ್ಲೂ ಭಯಪಡದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಾಗಾರದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕುಮಾರಿ, ಕಂಪ್ಯೂಟರ್ […]

Continue Reading

ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನ

ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾ ನೇತೃತ್ವದಲ್ಲಿ ಉಂಡೆಮನೆ ಶಂಭು ಶರ್ಮ ಪ್ರತಿಷ್ಠಾನದ ವತಿಯಿಂದ ಪರೀಕ್ಷೆ ಎದುರಿಸುವ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.   ಮುಲ್ಲಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಶ್ರೀ ಯು.ಎಸ್. ವಿಶ್ವೇಶ್ವರ ಭಟ್ ತರಬೇತಿ ನೀಡಿದರು.   ಪರೀಕ್ಷೆ ಹೇಗೆ ಎದುರಿಸಬೇಕು, ಯಾವ ರೀತಿ ಸಿದ್ಧರಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು. ಕೋ ಆರ್ಡಿನೇಟರ್ ಶ್ರೀ ಅನಂತನಾರಾಯಣ ಪದಕಣ್ಣಾಯ ತರಬೇತಿಗೆ ಸಹಾಯ […]

Continue Reading

ಮಂಗಳೂರು ಶ್ರೀಭಾರತೀ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ : ಮಾತಾಪಿತೃ ಪೂಜೆಯೊಂದಿಗೆ ಆಚರಣೆ

ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಪ್ರೌಢಶಾಲೆಯಲ್ಲಿ‌ ಮಕ್ಕಳ ದಿನಾಚರಣೆಯಂದು ಮಾತಾಪಿತೃ ಪೂಜೆ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.   ಶಾಲೆಯ ಶಂಕರಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾತಾಪಿತೃ ಪೂಜೆ ಕಾರ್ಯಕ್ರಮದಲ್ಲಿ 10ನೆಯ ತರಗತಿಯ ಮಕ್ಕಳು ತಮ್ಮ ತಂದೆ-ತಾಯಿಗಳ ಪಾದಪೂಜೆ ನೆರವೇರಿಸಿದರು.   ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಶ್ರೀ ಕೇಶವ ಭಟ್ ದಿವಾಣ ಮಾತನಾಡಿ, ತಂದೆ-ತಾಯಿ ನಮ್ಮ‌ ಕಣ್ಣಿಗೆ ಕಾಣುವ ದೇವರು. ಅವರ ಆಶೀರ್ವಾದ ಇದ್ದಾಗ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯ ಎಂದರು. ಹೆತ್ತವರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳುವ […]

Continue Reading