ಪರೀಕ್ಷಾ ಸಿದ್ಧತಾ ಕಾರ್ಯಾಗಾರ

ಶಿಕ್ಷಣ

ಮುಳ್ಳೇರಿಯ: ಶ್ರೀಸಂಸ್ಥಾನದವರ ದಿವ್ಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುವ ಹವ್ಯಕ ಮಹಾಮಂಡಲದ ಮುಳ್ಳೇರಿಯ ಮಂಡಲ ವಿದ್ಯಾರ್ಥಿವಾಹಿನಿಯ ಸಹಕಾರದೊಂದಿಗೆ 15.02.2019, ಶುಕ್ರವಾರದಂದು ಪರೀಕ್ಷೆ-ನಿರೀಕ್ಷೆ ಕಾರ್ಯಗಾರ ನಡೆಯಿತು. ಜಾಲ್ಸೂರಿನ

ಈಶ್ವರಮಂಗಲ ವಲಯದ ವಿನೋಬನಗರ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗಳಲ್ಲಿ ಧನಾತ್ಮಕ ಉತ್ತರಿಸುವಿಕೆ’ ಎಂಬ ವಿಷಯದ ಕುರಿತು ತರಬೇತಿ ನೀಡಿ ಮಾತನಾಡಿದ ವಿಶ್ರಾಂತ ಪ್ರಾಂಶುಪಾಲ ಶ್ರೀ ಯು. ಎಸ್. ವಿಶ್ವೇಶ್ವರ ಭಟ್ , ಸಕಾರಾತ್ಮಕ ಚಿಂತನೆ, ಸಕಾರಾತ್ಮಕ ಪ್ರಶ್ನೆಪತ್ರಿಕೆಯ ಅಧ್ಯಯನ, ಸಕಾರಾತ್ಮಕ ಉತ್ತರ ಬರೆಯುವಿಕೆಗಳಿಂದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಯಶಸ್ಸು ಪಡೆಯಬಹುದು ಎಂಬುದಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲದ ವಿದ್ಯಾರ್ಥಿವಾಹಿನಿ ಈಶ್ವರಮಂಗಲ ವಲಯವು ಇಲ್ಲಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪರೀಕ್ಷೆ-ನಿರೀಕ್ಷೆ ಸರಣಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶ್ರೀ ಎನ್. ಗೋಪಾಲ ರಾವ್ ಸ್ವಾಗತಿಸಿ ವಂದಿಸಿದರು. ಈಶ್ವರಮಂಗಲ ವಲಯದ ಕಾರ್ಯದರ್ಶಿ ಶ್ರೀ ಗೋವಿಂದ ರಾಜ್ ದೇಲಂಪಾಡಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಗುರಿಕ್ಕಾರ ಶ್ರೀ ನಾರಾಯಣ ಭಟ್ ಗಬ್ಬಲಡ್ಕ ವಿದ್ಯಾರ್ಥಿವಾಹಿನಿ ಆಯೋಜಿಸಿದ ತರಬೇತಿಯನ್ನು ಸಂಯೋಜಿಸಿದ್ದರು.

 

Author Details


Srimukha

Leave a Reply

Your email address will not be published. Required fields are marked *