ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನ

ಶಿಕ್ಷಣ ಸುದ್ದಿ

ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾ ನೇತೃತ್ವದಲ್ಲಿ ಉಂಡೆಮನೆ ಶಂಭು ಶರ್ಮ ಪ್ರತಿಷ್ಠಾನದ ವತಿಯಿಂದ ಪರೀಕ್ಷೆ ಎದುರಿಸುವ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.

 

ಮುಲ್ಲಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಶ್ರೀ ಯು.ಎಸ್. ವಿಶ್ವೇಶ್ವರ ಭಟ್ ತರಬೇತಿ ನೀಡಿದರು.

 

ಪರೀಕ್ಷೆ ಹೇಗೆ ಎದುರಿಸಬೇಕು, ಯಾವ ರೀತಿ ಸಿದ್ಧರಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು. ಕೋ ಆರ್ಡಿನೇಟರ್ ಶ್ರೀ ಅನಂತನಾರಾಯಣ ಪದಕಣ್ಣಾಯ ತರಬೇತಿಗೆ ಸಹಾಯ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧನಲಕ್ಷ್ಮೀ, ಶಿಕ್ಷಕಿ ಶ್ರೀಮತಿ ಕೃಪಾ ಉಪಸ್ಥಿತರಿದ್ದರು. ನೂರಾರು ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡರು.

Author Details


Srimukha

Leave a Reply

Your email address will not be published. Required fields are marked *